ಮಾಯಾ ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಕನ್ನಡ ಮಾಧ್ಯಮದಲ್ಲಿ ನಾನು ೧೦ನೇ ತರಗತಿ ಮುಗಿಸಿದ ೧೦ ವರ್ಷಗಳ ಬಳಿಕ, ಸರಕಾರವು ಪ್ರಾಥಮಿಕ ಶಿಕ್ಷಣ ಮಾಧ್ಯಮದ ಬಗ್ಗೆ ಚಿಂತಿಸುತ್ತಿರುವ ಸಂದರ್ಭದಲ್ಲಿ ಈ ೧೦ ವರ್ಷಗಳ ಅನುಭವವನ್ನು ಸಮಾಜದ ಮುಂದಿಡಲು ಬಯಸುತ್ತೇನೆ. ೧೦ ವರ್ಷಗಳ ಹಿಂದೆ ಶಿಕ್ಷಣ ಮಾಧ್ಯಮದ ಬಗ್ಗೆ ಅವಲೋಕಿಸುವ ಯೋಚನಾಶಕ್ತಿ ನನ್ನ ಒಳಗಿತ್ತೆಂದು ಹೇಳಲಾಗದು. ಪದವಿಪೂರ್ವ ಹಂತವನ್ನು ಪ್ರವೇಶಿಸುವಾಗ ಇದ್ದುದು ಛಲವೊಂದೇ. ಕನ್ನಡ ಮಾಧ್ಯಮ ತೊಡಕಾಗದೆಂಬ ಧೈರ್ಯವೊಂದೇ… ಆ ಧೈರ್ಯವು ಜಗತ್ತನ್ನು ನಡೆಸುವ ಶಕ್ತಿಯ ಧನಾತ್ಮಕ ಪ್ರತಿಕ್ರಿಯೆಯೊಂದಿಗೆ [...]
ಬಂಟ್ವಾಳ, ಜು ೨೦- ವಿದ್ಯಾಭ್ಯಾಸ ಕಠಿಣವಾಗುತ್ತಿದ್ದರಿಂದ ನೊಂದುಕೊಂಡ ಹದಿಹರಯದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಿ. ಮೂಡ ಗ್ರಾಮದ ಪಣೋಳಿಬೈಲು ಸಮೀಪದ ಬೊಳ್ಳಾಯಿ ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಬೊಳ್ಳಾಯಿ ನಿವಾಸಿ ಕೃಷ್ಣಪ್ಪ ಕುಲಾಲ-ಹರಿಣಾಕ್ಷಿ ದಂಪತಿಗಳ ಪುತ್ರ ದೇವಿಪ್ರಸಾದ್(೧೪ ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ. ಏಳನೇ ತರಗತಿಯವರೆಗೆ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದ ದೇವಿಪ್ರಸಾದ್ ನನ್ನು ಪ್ರೌಢಶಾಲಾ ಶಿಕ್ಷಣಕ್ಕಾಗಿ ಆತನ ಹೆತ್ತವರು ಕುಕ್ಕಾಜೆಯ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿದ್ದರು. ಅವರ ಉದ್ದೇಶ ಒಳ್ಳೆಯದೇ ಇತ್ತಾದರೂ ಕನ್ನಡ [...]
ಮಾನ್ಯರೆ, ನಮಸ್ಕಾರ. ಕುಮಾರವ್ಯಾಸ ಭಾರತದ ಅಡಕ ಮುದ್ರಿಕೆ ನಿಮಗಾಗಿ ಸಿದ್ಧವಿದೆ. ಇದರ ಬೆಲೆ ರೂ ೮೦೦. ಕೋರಿಯರ್ ವೆಚ್ಚ ರೂ ೫೦ (ಒಟ್ಟು ರೂ ೮೫೦) ಈ ಮೊಬಲಗನ್ನು ಕನ್ನಡ ಗಣಕ ಪರಿಷತ್ತಿಗೆ ಮನಿ ಆರ್ಡರ್, ಚೆಕ್, ಡಿಡಿ ಮೂಲಕ (ಕನ್ನಡ ಗಣಕ ಪರಿಷತ್ತು ಬೆಂಗಳೂರು ಈ ಹೆಸರಲ್ಲಿ ತೆಗೆಯಬೇಕು) ಕಳುಹಿಸಿದರೆ. ಕೋರಿಯರ್ ಮೂಲಕ ಕಳುಹಿಸಲಾಗುವುದು. ಬ್ಯಾಂಕ್ ನಿಂದ ನೇರ ವರ್ಗಾಯಿಸುವವರಿಗೆ ಮಾಹಿತಿ: ಕನ್ನಡ ಗಣಕ ಪರಿಷತ್ತು, ಭಾರತೀಯ ಸ್ಟೇಟ್ ಬ್ಯಾಂಕ್ ಉಳಿತಾಯ ಖಾತೆ ಸಂಖ್ಯೆ ೧೦೩೦೯೧೧೨೭೦೨ [...]
ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡಬೇಕೆಂಬ ಜಗತ್ತಿನ ಎಲ್ಲ ಶ್ರೇಷ್ಠ ಶಿಕ್ಷಣ ತಜ್ಞರ ವಿಚಾರಗಳು, ನ್ಯಾಯಾಲಯಗಳ ಅಭಿಪ್ರಾಯಗಳನ್ನು ಪರಿಶೀಲಿಸಿ ಕರ್ನಾಟಕ ಸರಕಾರ ತನ್ನ ಭಾಷಾನೀತಿಯನ್ನು ಅಂತಿಮವಾಗಿ ರೂಪಿಸಿತು(೧೯೯೪). ಅದರ ಪ್ರಕಾರ ಒಂದರಿಂದ ಐದನೇ ತರಗತಿಯವರೆಗೆ ಮಾತೃಭಾಷೆ/ರಾಜ್ಯಭಾಷೆ ಮಾತ್ರ ಕಡ್ಡಾಯ ಶಿಕ್ಷಣ ಮಾಧ್ಯಮ. ಒಂದು ಮತ್ತು ಎರಡನೆಯ ತರಗತಿಗಳಲ್ಲಿ ಮಾತೃಭಾಷೆ ಅಥವಾ ಪರಿಸರಭಾಷೆ/ರಾಜ್ಯಭಾಷೆಗಳಲ್ಲಿ ಒಂದು ಭಾಷೆ ಮಾತ್ರ ಕಲಿಕೆಯ ವಿಷಯ. ಕನ್ನಡ ಮಾತೃಭಾಷೆಯಲ್ಲದವರಿಗೆ ಒಂದನೆಯ ತರಗತಿಯಲ್ಲಿ ಪರಿಸರಭಾಷೆ/ರಾಜ್ಯಭಾಷೆಯಾದ ಕನ್ನಡವೂ ಕಲಿಕೆಯ ವಿಷಯವಲ್ಲ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ [...]